Links

Friday, August 3, 2018

Kere haLLa bhavigaLu

ಕೆರೆ ಹಳ್ಳ ಭಾವಿಗಳು ಮೈದೆಗೆದರೆ
ಗುಳ್ಳೆ, ಗೊರಚೆ, ಚಿಪ್ಪು ಕಾಣಬಹವು!
ವಾರಿಧಿ ಮೈದೆಗೆದರೆ
ರತ್ನ ಮುತ್ತುಗಳು ಕಾಣಬಹವು!
ಕೂಡಲಸಂಗನ ಶರಣರು
ಮನದೆರೆದು ಮಾತನಾಡಿದರೆ
ಲಿಂಗವೇ ಕಾಣಬಹುದು!

Wednesday, July 11, 2018

Muthu udakadalagadu


ಮುತ್ತು ಉದಕದಲಾಗದು,
ಉದಕ ಮುತ್ತಿನೊಲಾಗದು,
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ.
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ,
ಕರ್ತೃ ಕೂಡಲಸಂಗಮದೇವರ
ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.

Saturday, June 16, 2018

baDa paShu pankadalli biddare

ಬಡಪಶು ಪಂಕದಲ್ಲಿ ಬಿದ್ದರೆ ಕಾಲ ಬಡಿವುದಲ್ಲದೆ ಬೇರೆ ಗತಿಯುಂಟೆ ? ಶಿವ ಶಿವಾ! ಹೋದಹೆ ಹೋದಹೆನಯ್ಯ! ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ                ಪಶುವಾನು ಪಶುಪತಿ ನೀನು ತುಡುಗುಣಿಯೆಂದೆನ್ನ ಹಿಡಿದು ಬಡಿಯದ ಮುನ್ನ ಒಡೆಯ ನಿಮ್ಮ ಬಯ್ಯದಂತೆ ಮಾಡು ಕೂಡಲಸಂಗಮದೇವ
                           

Matimandabagu kaaNade iddanayya

ಮತಿಮಂದನಾಗಿ ಗತಿಯ ಕಾಣದೆ ಇದ್ದೆನಯ್ಯಾ
ಹುಟ್ಟುಗುರುಡನ ಕೈಯ ಕೋಲ ಕೊಟ್ಟು ನಡೆಸುವಂತೆ ನಡೆಸಯ್ಯಾ ಎನ್ನ               ನಿಮ್ಮ ಅಚ್ಚ ಶರಣರ ಒಕ್ಕುದ ಮಿಕ್ಕುದ ನಚ್ಚಿಸು ಮಚ್ಚಿಸು ಕೂಡಲಸಂಗಮದೇವಾ

                           

Kaage ondaguLa kanDaDe

ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು
ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ
ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಂದ ಕರಕಷ್ಟ ಕೂಡಲಸಂಗಮದೇವಾ

Japatala nitya nemavenagupadesha

ಜಪತಪ ನಿತ್ಯನೇಮವೆನಗುಪದೇಶ
ನಿಮ್ಮ ನಾಮವೆನಗೆ ಮಂತ್ರ
ಶಿವನಾಮವೆನಗೆ ತಂತ್ರ
ಕೂಡಲಸಂಗಮದೇವಯ್ಯಾ  ನಿಮ್ಮ ನಾಮವೆನಗೆ ಕಾಮಧೇನು

Veda naDanaDugithu


ವೇದ ನಡನಡುಗಿತ್ತು, ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತಯ್ಯಾ !
ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯಾ !
ಆಗಮ ಹೆರತೊಲಗಿ ಅಗಲಿದ್ದಿತಯ್ಯಾ !
ನಮ್ಮ ಕೂಡಲಸಂಗಯ್ಯನು
ಮಾದಾರ ಚೆನ್ನಯ್ಯನ ಮನೆಯಲುಂಡ ಕಾರಣ.

Udaya madhyahna sandhya kaalava

ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿ
ಮಾಡುವ ಕರ್ಮಿ ನೀ ಕೇಳಾ;
ಉದಯವೆಂದೇನೊ ಶರಣಂಗೆ
ಮಧ್ಯಾಹ್ನವೆಂದೇನೊ ಶರಣಂಗೆ
ಅಸ್ತಮಾನವೆಂದೇನೊ ಶರಣಂಗೆ
ಮಹಾಮೇರುವಿನ ಮರೆಯಲ್ಲಿರ್ದು
ತಮ್ಮ ನೆಳಲನರಸುವ ಭಾವಭ್ರಮಿತರ ಮೆಚ್ಚ
ನಮ್ಮ ಕೂಡಲಸಂಗಮದೇವರು

Enage nimma nenahaadaga udaya

ಎನಗೆ ನಿಮ್ಮ ನೆನಹಾದಾಗ ಉದಯ
ಎನಗೆ ನಿಮ್ಮ ಮರಹಾದಾಗ ಅಸ್ತಮಾನ
ಎನಗೆ ನಿಮ್ಮ ನೆನಹವೆ  ಜೀವನ
ಎನಗೆ ನಿಮ್ಮ ನೆನಹವೆ ಪ್ರಾಣ ಕಾಣಾ ತಂದೆ
ಸ್ವಾಮಿ ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯಾ
ವದನದಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ
                          

Friday, June 15, 2018

Sutradhaari manada mailigeya


ಸೂತ್ರಧಾರಿ ಮನದ ಮೈಲಿಗೆಯ ಕಳೆಯಬಂದನಯ್ಯಾ ಮಡಿವಾಳನು.
ಎನ್ನ ಕಾಯದ ಮೈಲಿಗೆಯ ತಂದು ತನ್ನ ಮುಂದೆ ಇರಿಸಿದೆಡೆ
ಸಮತೆಯೆಂಬ ಕೂಪತೋಹಿನಲ್ಲಿ ಅದ್ದಿ, ಕಟ್ಟಿ ಹಿಳಿದನಯ್ಯಾ.
ಪಂಚೇಂದ್ರಿಯವರ್ಗಂಗಳ ಜ್ಞಾನವೆಂಬ ನಿರ್ಮಲಜಲದಲ್ಲಿ
ಅಲುಬಿ ಸೆಳೆದನಯ್ಯಾ.
ರವಿಶಶಿಶಿಖಿಯ ತೇಜದಲ್ಲಿ ಆರಿಸಿದನು,
ಚತುರ್ದಶ ಷೋಡಶವೆಂಬ ಘಳಿಗೆಯ ಮಾಡಿದನು.
ಸಮಾಧಾನವೆಂಬ ಅಡ್ಡೆಯ ಮೇಲಿರಿಸಿ ಸಮಗುಣವೆಂಬ
ಕೊಡತಿಯಲ್ಲಿ ಘಟ್ಟಿಸಿದನು.
ಹರಿಯಿತ್ತಯ್ಯಾ ಸೆರಗು ಮೂರಾಗಿ.
ಆ ಮೂರರಿವೆಯ ಕೊಟ್ಟನಯ್ಯಾ, ಎನ್ನ ಕೈಯಲ್ಲಿ,
ಆ ಅರಿವೆಯ ಗುರುವಿಂಗೊಂದ ಕೊಟ್ಟೆನು,
ಲಿಂಗಕ್ಕೊಂದ ಕೊಟ್ಟೆನು, ಜಂಗಮಕ್ಕೊಂದ ಕೊಟ್ಟೆನು.
ಎನಗೆ ಕೊಟ್ಟ ಮೂರರಿವೆಯನೂ
ಒಂದುಮಾಡಿ
ಹೊದೆದುಕೊಂಡು ನಿಶ್ಚಿಂತನಾಗಿ,
ಮಡಿವಾಳನ ಕೃಪೆಯಿಂದಲಾನು ಬದುಕಿದೆನು
ಕಾಣಾ, ಕೂಡಲಸಂಗಮದೇವಾ.

Saturday, May 19, 2018

PuNya paapavemba

ಪುಣ್ಯ ಪಾಪವೆಂಬ ಉಭಯ ಕರ್ಮವನಾರು ಬಲ್ಲರಯ್ಯಾ ? ಇವನಾರುಂಬರು !
ಕಾಯ ತಾನುಂಬಡೆ ಕಾಯ ತಾ ಮಣ್ಣು
ಜೀವ ತಾನುಂಬಡೆ ಜೀವ ತಾ ಬಯಲು
ಈ ಉಭಯ ನಿರ್ಣಯವ ಕೂಡಲಸಂಗಮದೇವಾ ನಿಮ್ಮ ಶರಣ ಬಲ್ಲ

                         

Sunday, April 8, 2018

Sharanu nidre


ಶರಣ ನಿದ್ರೆಗೈದಡೆ ಜಪ ಕಾಣಿರೊ
ಶರಣೆದ್ದು ಕುಳಿತೆಡೆ ಶಿವರಾತ್ರಿ ಕಾಣಿರೊ
ಶರಣ ನಡೆದುದೆ ಪಾವನ ಕಾಣಿರೊ
ಶರಣ ನುಡಿದುದೆ ಶಿವತತ್ಪ ಕಾಣಿರೊ
ಕೂಡಲಸಂಗನ ಶರಣನ ಕಾಯವೇ ಕೈಲಾಸ ಕಾಣಿರೊ