Links

Wednesday, July 11, 2018

Muthu udakadalagadu


ಮುತ್ತು ಉದಕದಲಾಗದು,
ಉದಕ ಮುತ್ತಿನೊಲಾಗದು,
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ.
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ,
ಕರ್ತೃ ಕೂಡಲಸಂಗಮದೇವರ
ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.